Cover

Nooru Simhasangalu

Jayamohan

Ungekürzt 9789355441737
2 Stunden 15 Minuten
Einige Artikel enthalten Affiliate-Links (gekennzeichnet mit einem Sternchen *). Wenn ihr auf diese Links klickt und Produkte kauft, erhalten wir eine kleine Provision, ohne dass für euch zusätzliche Kosten entstehen. Eure Unterstützung hilft, diese Seite am Laufen zu halten und weiterhin nützlichen Content zu erstellen. Danke für eure Unterstützung!

Vom Herausgeber

'ನೂರು ಸಿಂಹಾಸನಗಳು' ಮಲಯಾಳಂ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದವಾಗಿರುವ ಒಂದು ಕಿರು ಕಾದಂಬರಿ. ಇದರ ಮೂಲ ಲೇಖಕರು ಜಯಮೋಹನ್ ಅವರು, ಇದು ಐ.ಎ.ಎಸ್. ಅಧಿಕಾರಿಯೊಬ್ಬರ ಆತ್ಮಕಥೆ. ಇದನ್ನು ಕನ್ನಡಕ್ಕೆ ಅನುವಾದ ಮಾಡಿರುವವರು ಶಿವಮೊಗ್ಗದಲ್ಲಿ ನೆಲೆಸಿರುವ ಕೆ. ಪ್ರಭಾಕರನ್ ಅವರು. ಈ ಕಿರು ಕಾದಂಬರಿಯ ಮೂಲ ನಿರೂಪಕ ತೀರಾ ಬಡತನದಿಂದ ಬಂದು ಓದಿ ಸಾಧಿಸಿದವನು (ಒಬ್ಬ ಐ.ಎ.ಎಸ್. ಅಧಿಕಾರಿ). ಒಬ್ಬ ಶ್ರೀಮಂತ ಕುಟುಂಬದ ಅಥವಾ ಚೆನ್ನಾಗಿ ಓದಿಕೊಂಡ ಮೇಲ್ಜಾತಿಯ ಮನೆಯಿಂದ ಬಂದು ಐ.ಎ.ಎಸ್. ಮಾಡುವುದು, ಅಥವಾ ಒಳ್ಳೆಯ ಅಧಿಕಾರಿಯಾಗುವುದು, ಅಥವಾ ಬದುಕಿನಲ್ಲಿ ಉನ್ನತ ಸಾಧನೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಲ್ಲ. ಬದುಕಿನಲ್ಲಿ ಯಾವ ಬೆಂಬಲವೂ ಇಲ್ಲದೆ ವ್ಯಕ್ತಿ ತನ್ನ ವೈಯುಕ್ತಿಕ ಹೋರಾಟದ ಮೂಲಕ ಸಾಧನೆ ಮಾಡಿದರೆ ಅದು ಮಹಾ ಸಾಧನೆ ಎಂದು ಹೇಳಬಹುದು. ಅದರಲ್ಲೂ ಸಮಾಜದಿಂದ ತಿರಸ್ಕರಿಸಲ್ಪಟ್ಟ, ತೀರಾ ಕೆಳಮಟ್ಟದ, ಅವರನ್ನು ಮುಟ್ಟಿಸಿಕೊಳ್ಳುವುದೇ ಪಾಪ ಎಂದು ದೂಡಲ್ಪಟ್ಟ ಜಾತಿಯಿಂದ ಬಂದು ಸ್ವಪ್ರಯತ್ನದಿಂದ ಐ.ಎ.ಎಸ್. ಅಧಿಕಾರಿಯಾದರೆ ಅದು ನಿಜವಾದ ಸಾಧನೆ. ಅದು ಎಲ್ಲರೂ ಹೆಮ್ಮೆ ಪಡುವಂತದ್ದು. ಸಮಾಜದಿಂದ ತುಳಿಯಲ್ಪಟ್ಟ ಅತೀಯಾಗಿ ಹಿಂದುಳಿದ ವರ್ಗದ ಭಿಕ್ಷುಕಿ ಮಹಿಳೆಯೊಬ್ಬಳಿಗೆ ಮಗುವಾಗಿ ಜನಿಸಿದ ಕಥಾನಾಯಕ ಸಮಾಜ ಸುಧಾರಕರಾಗಿದ್ದ ನಾರಾಯಣ ಗುರುಗಳು ಸ್ಥಾಪಿಸಿದ ಆಶ್ರಮವೊಂದರಲ್ಲಿ ಕಿರಿಯ ಗುರುಗಳೊಬ್ಬರ ಸಹಾಯದಿಂದ ವಿದ್ಯೆ ಕಲಿತು ಸಿವಿಲ್ ಸರ್ವೀಸ್‍ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಒಬ್ಬ ದೊಡ್ಡ ಐಎಎಸ್ ಅಧಿಕಾರಿಯ ದುರಂತ ಬದುಕಿನ ನೋವಿನ ವ್ಯಥೆಯ ಕಥೆಯನ್ನು ಈ ಕಾದಂಬರಿ ತುಂಬಾ ಚೆನ್ನಾಗಿ ಚಿತ್ರಿಸಿದೆ ಎಂದು ಹೇಳಬಹುದು. - ಅವಧಿ ವೆಬ್ ಮ್ಯಾಗಜೀನ್ ವಿಮರ್ಶೆಯಲ್ಲಿ ಪ್ರಸನ್ನ ಸಂತೆಕಡೂರು
Vom Herausgeber
'ನೂರು ಸಿಂಹಾಸನಗಳು' ಮಲಯಾಳಂ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದವಾಗಿರುವ ಒಂದು ಕಿರು ಕಾದಂಬರಿ. ಇದರ ಮೂಲ ಲೇಖಕರು ಜಯಮೋಹನ್ ಅವರು, ಇದು ಐ.ಎ.ಎಸ್. ಅಧಿಕಾರಿಯೊಬ್ಬರ ಆತ್ಮಕಥೆ. ಇದನ್ನು ಕನ್ನಡಕ್ಕೆ ಅನುವಾದ ಮಾಡಿರುವವರು ಶಿವಮೊಗ್ಗದಲ್ಲಿ ನೆಲೆಸಿರುವ ಕೆ. ಪ್ರಭಾಕರನ್ ಅವರು. ಈ ಕಿರು ಕಾದಂಬರಿಯ ಮೂಲ ನಿರೂಪಕ ತೀರಾ ಬಡತನದಿಂದ ಬಂದು ಓದಿ ಸಾಧಿಸಿದವನು (ಒಬ್ಬ ಐ.ಎ.ಎಸ್. ಅಧಿಕಾರಿ). ಒಬ್ಬ ಶ್ರೀಮಂತ ಕುಟುಂಬದ ಅಥವಾ ಚೆನ್ನಾಗಿ ಓದಿಕೊಂಡ ಮೇಲ್ಜಾತಿಯ ಮನೆಯಿಂದ ಬಂದು ಐ.ಎ.ಎಸ್. ಮಾಡುವುದು, ಅಥವಾ ಒಳ್ಳೆಯ ಅಧಿಕಾರಿಯಾಗುವುದು, ಅಥವಾ ಬದುಕಿನಲ್ಲಿ ಉನ್ನತ ಸಾಧನೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಲ್ಲ. ಬದುಕಿನಲ್ಲಿ ಯಾವ ಬೆಂಬಲವೂ ಇಲ್ಲದೆ ವ್ಯಕ್ತಿ ತನ್ನ ವೈಯುಕ್ತಿಕ ಹೋರಾಟದ ಮೂಲಕ ಸಾಧನೆ ಮಾಡಿದರೆ ಅದು ಮಹಾ ಸಾಧನೆ ಎಂದು ಹೇಳಬಹುದು. ಅದರಲ್ಲೂ ಸಮಾಜದಿಂದ ತಿರಸ್ಕರಿಸಲ್ಪಟ್ಟ, ತೀರಾ ಕೆಳಮಟ್ಟದ, ಅವರನ್ನು ಮುಟ್ಟಿಸಿಕೊಳ್ಳುವುದೇ ಪಾಪ ಎಂದು ದೂಡಲ್ಪಟ್ಟ ಜಾತಿಯಿಂದ ಬಂದು ಸ್ವಪ್ರಯತ್ನದಿಂದ ಐ.ಎ.ಎಸ್. ಅಧಿಕಾರಿಯಾದರೆ ಅದು ನಿಜವಾದ ಸಾಧನೆ. ಅದು ಎಲ್ಲರೂ ಹೆಮ್ಮೆ ಪಡುವಂತದ್ದು. ಸಮಾಜದಿಂದ ತುಳಿಯಲ್ಪಟ್ಟ ಅತೀಯಾಗಿ ಹಿಂದುಳಿದ ವರ್ಗದ ಭಿಕ್ಷುಕಿ ಮಹಿಳೆಯೊಬ್ಬಳಿಗೆ ಮಗುವಾಗಿ ಜನಿಸಿದ ಕಥಾನಾಯಕ ಸಮಾಜ ಸುಧಾರಕರಾಗಿದ್ದ ನಾರಾಯಣ ಗುರುಗಳು ಸ್ಥಾಪಿಸಿದ ಆಶ್ರಮವೊಂದರಲ್ಲಿ ಕಿರಿಯ ಗುರುಗಳೊಬ್ಬರ ಸಹಾಯದಿಂದ ವಿದ್ಯೆ ಕಲಿತು ಸಿವಿಲ್ ಸರ್ವೀಸ್‍ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಒಬ್ಬ ದೊಡ್ಡ ಐಎಎಸ್ ಅಧಿಕಾರಿಯ ದುರಂತ ಬದುಕಿನ ನೋವಿನ ವ್ಯಥೆಯ ಕಥೆಯನ್ನು ಈ ಕಾದಂಬರಿ ತುಂಬಾ ಚೆನ್ನಾಗಿ ಚಿತ್ರಿಸಿದೆ ಎಂದು ಹೇಳಬಹುದು. - ಅವಧಿ ವೆಬ್ ಮ್ಯಾಗಜೀನ್ ವಿಮರ್ಶೆಯಲ್ಲಿ ಪ್ರಸನ್ನ ಸಂತೆಕಡೂರು
Veröffentlichungsdatum
25.05.22

Storyside IN