Cover

Nagtha Nali Altha Kali

Gangavathi Pranesh

Unabridged 9789354830303
4 hours 40 minutes
Some articles contain affiliate links (marked with an asterisk *). If you click on these links and purchase products, we will receive a small commission at no extra cost to you. Your support helps to keep this site running and to continue creating useful content. Thank you for your support!

From the publisher

ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! 'ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ. ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' 'ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.
From the publisher
ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! 'ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ. ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' 'ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.
Release date
11/05/2021

Storyside IN